ನಮ್ಮ ಹಿರಿಯರ ಹಬ್ಬಗಳು ಮತ್ತು ನಮ್ಮ ಇಂದಿನ ಮನೋಭಾವಗಳು
ನಮ್ಮ ಹಿರಿಯರ ಹಬ್ಬಗಳು ಮತ್ತು ನಮ್ಮ ಇಂದಿನ ಮನೋಭಾವಗಳು (ನೇಸರ ಉದಯೋನ್ಮುಖ ಬರಹಗಾರರ ವೇದಿಕೆ, ಬೆಂಗಳೂರು ಸ್ಪರ್ಧೆಯಲ್ಲಿ ಮೊದಲನೇ ಬಹುಮಾನ ಪಡೆದ ಲೇಖನ) ಅದೊಂದು ಕಾಲದಲ್ಲಿ , ಹಬ್ಬವೆಂದರೆ ಇಡೀ ಊರಿಗೆ ಊರೇ ಸಂಭ್ರಮದಿಂದ ಸಜ್ಜುಗೊಳ್ಳುತ್ತಿತ್ತು , ಹಬ್ಬದಿ ಹಿಂದಿನ ದಿನದಿಂದ ಹಬ್ಬ ಮುಗಿದ ಮೂರು ದಿನಗಳ ತನಕವೂ ಅದೇ ಸಂಭ್ರಮದಲ್ಲಿ ಜನರು ತಮ್ಮ ಎಲ್ಲಾ ನೋವು ಕಷ್ಟ ಕಾರ್ಪಣ್ಯಗಳನ್ನು ಮರೆತುಬಿಡುತ್ತಿದ್ದರು . ಮನೆಯ ಮೂಲೆ ಮೂಲೆಯ ಕಸ ಕೊಳೆ ತೆಗೆದು ತೋರಣ - ತಳಿರುಗಳಿಂದ ಶೃಂಗಾರಗೊಳ್ಳುತ್ತಿದ್ದವು , ಇಲ್ಲಿ ಯಾವುದೇ ತೋರಿಕೆ ಇರುತ್ತಿರಲಿಲ್ಲ ಮತ್ತು ಆಡಂ ಭ ರವೂ ಇರುತ್ತಿರಲಿಲ್ಲ . ತಮ್ಮ ಬಳಿ ಇರುವ ವಸ್ತುಗಳೇ ಸಾಕಾಗುತ್ತಿದ್ದವು . ಅದಕ್ಕಿಂತ ಹೆಚ್ಚಾಗಿ ವರ್ಷದ ಕೆಲವು ಹಬ್ಬಗಳನ್ನು ಮಾತ್ರವೇ ಈ ರೀತಿ ವಿಜೃಂಭಣೆಯಿಂದ ಮಾಡಲಾಗುತಿತ್ತು . ನಾವೆಲ್ಲಾ ಚಿಕ್ಕವರಿದ್ದಾಗ ಹಬ್ಬದ ದಿನ ನಮ್ಮಗಳ ಅಪ್ಪಂದಿರು ಪೇಟೆಗೆ ಹೋಗಿ ಮದ್ಯ್ಹಾನದ ವೇಳೆ ಹಬ್ಬದ ಸಾಮಾನು ತರುತ್ತಿದ್ರು , ನಾವೆಲ್ಲಾ ಅವರ ಬರುವಿಕೆಯನ್ನೇ ಎದುರು ನೋಡುತ್ತಾ ಏನೇನು ತರಬಹುದು , ಯಾವ ಬಣ್ಣದ ಬಟ್ಟೆ ತರಬಹುದು , ಬಲೂನು ಪೀಪಿ ತರಬಹುದಾ ಎಂಬ ಕುತೂಹಲದಿಂದ ಕಾಯುತ್ತಿದ್ದೇವು . ಆ ಕುತೂಹಲದಲ್ಲಿದ್ದ ಖುಷಿ ಸಮಾನವಾದುದು ಯಾವುದೂ ಇಲ್ಲ . ಈಗ ಏನಾಗಿದೆ , ತಿಂಗಳಿಗೆ ಎರಡು ಹಬ್ಬಗಳು ಸಂಕಷ್ಟಿ , ಏಕಾದಶಿ , ಚತುರ್ಥಿ , ಗೌರಿ ವ್ರತ , ಲಕ್ಷ್ಮೀಪೂಜೆ ಹೀಗೆ .